ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

 ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 6ರಿಂದ 18ವರ್ಷ ವಯೋಮಿತಿಯೊಳಗಿನ ಹಾಗೂ 2002ರ ಆಗಸ್ಟ್ 01ರ ನಂತರ ಜನಿಸಿದ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

Last Updated : Jul 22, 2020, 04:00 PM IST
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ title=

ಬೆಂಗಳೂರು:  ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 6ರಿಂದ 18ವರ್ಷ ವಯೋಮಿತಿಯೊಳಗಿನ ಹಾಗೂ 2002ರ ಆಗಸ್ಟ್ 01ರ ನಂತರ ಜನಿಸಿದ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ನಗದು ಪುರಸ್ಕಾರ ಮತ್ತು ಪ್ರಶಸ್ತಿಪತ್ರ ನೀಡಲಾಗುವುದು. ಪ್ರಕರಣವು 2019ರ ಆಗಸ್ಟ್ ನಿಂದ 2020ರ ಜುಲೈ ಮಾಸಾಂತ್ಯದಲ್ಲಿ ಘಟಿಸಿದ್ದು, ಅಸಾಧಾರಣ ಶೌರ್ಯವನ್ನು ಸಾಧಿಸಿರಬೇಕು. ಈ ಸಾಧನೆಯು ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು. ಧೈರ್ಯವನ್ನು ಪ್ರದರ್ಶಿಸಿದ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಶಾಲಾ ಶಿಕ್ಷಕರು ಸಾಧನೆಯನ್ನು ಗುರುತಿಸಿ ಜಿಲ್ಲಾ ಮಟ್ಟಕ್ಕೆ ತಿಳಿಸಬಹುದು.

ಆಸಕ್ತರು ನಿಗಧಿತ ನಮೂನೆಯ ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100ಅಡಿ ರಸ್ತೆ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಮಗುವಿನ ಭಾವಚಿತ್ರ-2, ಶೌರ್ಯ ಸಾಧನೆ ತೋರಿದ ಬಗ್ಗೆ ಆರಕ್ಷಕ ಇಲಾಖೆಯ ಪ್ರಾಥಮಿಕ ತನಿಖಾ ವರದಿ, ಜನ್ಮ ದಿನಾಂಕ ದೃಢೀಕರಣ, ಧೈರ್ಯ ಶೌರ್ಯ ತೋರಿದ ಬಗ್ಗೆ ಪತ್ರಿಕಾ ಪ್ರಕಟಣೆಗಳು ಹಾಗೂ ಘಟನೆಯ ವಿಸ್ತೃತ ವರದಿ ಮುಂತಾದ ಮಾಹಿತಿಯನ್ನು ಆಗಸ್ಟ್ 30ರೊಳಗಾಗಿ ಸಲ್ಲಿಸಬಹುದಾಗಿದೆ.

Trending News