ವಾಹನ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ಅರಿವು ಮೂಡಿಸಿ ಅಪಘಾತ ತಪ್ಪಿಸಿ : ಜಿ.ಜಗದೀಶ್

ಅತಿ ವೇಗದ ವಾಹನ ಚಾಲನೆಯಿಂದಾಗಿ ಬೆಂಗಳೂರಿನಲ್ಲಿ ಅಪಘಾತ ಹೆಚ್ಚಾಗುತ್ತಿದೆ ಹೀಗಾಗಿ ವಾಹನ ಸಂಚಾರ ನಿಯಮಗಳನ್ನು ಪಾಲಿಸುವಂತೆ ಚಾಲಕರಿಗೆ ಅರಿವು ಮೂಡಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಹೇಳಿದರು.

Written by - Zee Kannada News Desk | Last Updated : Jan 31, 2025, 09:35 PM IST
  • ಈ ಮೂಲಕ ರಸ್ತೆ ಅಪಘಾತಗಳನ್ನ ನಿಯಂತ್ರಿಸಬಹುದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
  • ವಾಹನಗಳ ವಿರುದ್ಧ ಕ್ರಮ ವಹಿಸಬೇಕೆಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ತಿಳಿಸಿದ್ದಾರೆ.
  • ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಹೇಳಿದರು.
ವಾಹನ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ಅರಿವು ಮೂಡಿಸಿ ಅಪಘಾತ ತಪ್ಪಿಸಿ : ಜಿ.ಜಗದೀಶ್ title=

ಅತಿ ವೇಗದ ವಾಹನ ಚಾಲನೆಯಿಂದಾಗಿ ಬೆಂಗಳೂರಿನಲ್ಲಿ ಅಪಘಾತ ಹೆಚ್ಚಾಗುತ್ತಿದೆ ಹೀಗಾಗಿ ವಾಹನ ಸಂಚಾರ ನಿಯಮಗಳನ್ನು ಪಾಲಿಸುವಂತೆ ಚಾಲಕರಿಗೆ ಅರಿವು ಮೂಡಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಅತಿ ವೇಗದ ಚಾಲನೆಯಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ಹೀಗಾಗಿ ವಾಹನ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ, ನಿಯಮಗಳ ಕುರಿತು ಅರಿವು ಮೂಡಿಸಬೇಕು. ಈ ಮೂಲಕ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು. 

ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಬೇಕು ಜೊತೆಗೆ ಸೂಚನಾ ಫಲಕ ಹಾಗೂ ಲೈಟಿಂಗ್ ಇದರೊಂದಿಗೆ ಬೆಳಕಿನ ಪ್ರತಿಫಲನಗಳನ್ನು ಅಳವಡಿಸಬೇಕು. ಈ ಮೂಲಕ ರಸ್ತೆ ಅಪಘಾತಗಳನ್ನ ನಿಯಂತ್ರಿಸಬಹುದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಇನ್ನು ವಿದ್ಯಾರ್ಥಿಗಳ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಹೆಲ್ಮೆಟ್ ರಹಿತ ವಾಹನ ಚಾಲನೆ, ವೇಗದ ಚಾಲನೆ, ಬೈಕ್ ವೀಲಿಂಗ್ ಮಾಡುವುದರಿಂದ ಅಪಘಾತಗಳು ಹೆಚ್ಚಾಗುತ್ತವೆ. ಈ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಹೆಚ್ಚಿನ ಗಾತ್ರದ ಸರಕುಗಳನ್ನು ಸಾಗಣೆ ಮಾಡುವುದರಿಂದ ರಸ್ತೆ ಹಾಳಾಗುತ್ತದೆ ಮತ್ತು ಇದರಿಂದ ರಸ್ತೆ ಗುಂಡಿಗಳು ಹೆಚ್ಚಾಗುತ್ತವೆ ಹೀಗಾಗಿ ವಾಹನಗಳನ್ನು ಪರಿಶೀಲನೆ ನಡೆಸಿ, ವಾಹನಗಳ ವಿರುದ್ಧ ಕ್ರಮ ವಹಿಸಬೇಕೆಂದು ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಸಭೆಯಲ್ಲಿ  ಲೋಕೊಪಾಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಚಂದ್ರಶೇಖರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ವಿಭಾಗ  ವ್ಯವಸ್ಥಾಪಕರಾದ ಸೌರಬ್ ಚೌಧರಿ, ಶಾಲಾ ಅಭಿವೃದ್ಧಿ ಯೋಜನೆ ಅಧಿಕಾರಿಗಳಾದ ಇಂದಿರಾ, ಬೆಂಗಳೂರು ವಿಭಾಗದ ಎಲ್ಲಾ ಆರ್.ಟಿ.ಓ ಅಧಿಕಾರಿಗಳು ಸೆರಿದಂತೆ  ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು  ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News