ನವಿಲುತೀರ್ಥ ಜಲಾಶಯ: ಜನ-ಜಾನುವಾರಗಳಿಗೆ ಕುಡಿಯುವುದಕ್ಕಾಗಿ ನೀರು ಬಿಡುಗಡೆ ಮಾಡಲು ಆದೇಶ

  2023 ನೇ ಸಾಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಯ ಮೂಲಕ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಜನವರಿ 22 ರಂದು ಸಾಯಂಕಾಲ 6 ಗಂಟೆಯಿಂದ ಫೆಬ್ರವರಿ 1, 2024ರ ವರೆಗೆ ನೀರನ್ನು ಕಾಲುವೆಗೆ ಬಿಡಲು ಆದೇಶಿಸಿರುತ್ತಾರೆ.

Written by - Manjunath N | Last Updated : Jan 19, 2024, 06:31 PM IST
  • ಬಿಡುಗಡೆಗೊಳಿಸಿದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಿಡುಗಡೆ ಮಾಡಲಾಗಿದ್ದು,
  • ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸುವಂತೆ ಪ್ರಾದೇಶಿಕ ಆಯುಕ್ತರ ವಿನಂತಿಸಿದ್ದಾರೆ
ನವಿಲುತೀರ್ಥ ಜಲಾಶಯ: ಜನ-ಜಾನುವಾರಗಳಿಗೆ ಕುಡಿಯುವುದಕ್ಕಾಗಿ ನೀರು ಬಿಡುಗಡೆ ಮಾಡಲು ಆದೇಶ title=

ಧಾರವಾಡ:  2023 ನೇ ಸಾಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಯ ಮೂಲಕ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಜನವರಿ 22 ರಂದು ಸಾಯಂಕಾಲ 6 ಗಂಟೆಯಿಂದ ಫೆಬ್ರವರಿ 1, 2024ರ ವರೆಗೆ ನೀರನ್ನು ಕಾಲುವೆಗೆ ಬಿಡಲು ಆದೇಶಿಸಿರುತ್ತಾರೆ.

ಇದನ್ನೂ ಓದಿ: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಎಂಟ್ರಿ

ಬಿಡುಗಡೆಗೊಳಿಸಿದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಿಡುಗಡೆ ಮಾಡಲಾಗಿದ್ದು, ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸುವಂತೆ ಪ್ರಾದೇಶಿಕ ಆಯುಕ್ತರ ವಿನಂತಿಸಿದ್ದಾರೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌‌ಗೆ ಜಾಮೀನು ಪ್ರಕರಣ

ಈ ಸಮಯದಲ್ಲಿ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಸಾರ್ವಜನಿಕರು ಸದರ ನೀರನ್ನು ಕೃಷಿ ಹಾಗೂ ಇನ್ನಿತರೆ ಬೇರೆ ಯಾವುದೇ ಉದ್ದೇಶಕ್ಕೆ ಪಂಪಸೆಟ್‍ನಿಂದ ಹಾಗೂ ಇನ್ನಿತರೇ ಉಪಕರಣಗಳಿಂದ ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಈ ಪ್ರದೇಶದಲ್ಲಿ ಈಗಾಗಲೇ ಸಿ.ಆರ್.ಪಿ.ಸಿ. 1973 ರ ಕಲಂ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.ನಿಬರ್ಂಧವನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ಅಂತಹ ಪಂಪಸೆಟ್ ಹಾಗೂ ಇತರೆ ಉಪಕರಣಗಳನ್ನು ಜಪ್ತಿ ಮಾಡಿಕೊಳ್ಳಲಾಗುವುದು ಹಾಗೂ ನಿಬರ್ಂಧವನ್ನು ಉಲ್ಲಂಘಿಸಿದವರ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಧಾರವಾಡ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News