IND vs BAN: ಕಾನ್ಪುರ್ ಕೊನೆಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ; ಈ 7 ಆಟಗಾರರಿಗಿಲ್ಲ ಅವಕಾಶ!

IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ 2ನೇ ಮತ್ತು ಕೊನೆಯ ಪಂದ್ಯ ಸೆಪ್ಟೆಂಬರ್ 27ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕಾನ್ಪುರದಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿದ್ದ 7 ಆಟಗಾರರು ಟೀಂ ಇಂಡಿಯಾದ ಭಾಗವಾಗಿಲ್ಲ.

Written by - Puttaraj K Alur | Last Updated : Sep 26, 2024, 07:53 AM IST
  • ಬಾಂಗ್ಲಾದೇಶ ವಿರುದ್ಧದ ಕೊನೆ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27ರಂದು ನಡೆಯಲಿದೆ‌
  • ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನಡೆಯಲಿರುವ ಪಂದ್ಯಕ್ಕೆ ಮಹತ್ವದ ಬದಲಾವಣೆ
  • ಕಳೆದ ಬಾರಿ ಟೀಂ ಇಂಡಿಯಾದಲ್ಲಿದ್ದ 7 ಆಟಗಾರರು ಈ ಪಂದ್ಯಕ್ಕೆ ಮಿಸ್ಸಿಂಗ್
IND vs BAN: ಕಾನ್ಪುರ್ ಕೊನೆಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ; ಈ 7 ಆಟಗಾರರಿಗಿಲ್ಲ ಅವಕಾಶ! title=
7 ಆಟಗಾರರು ಮಿಸ್ಸಿಂಗ್!

IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ 2ನೇ ಮತ್ತು ಕೊನೆಯ ಪಂದ್ಯ ಸೆಪ್ಟೆಂಬರ್ 27ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಟೆಸ್ಟ್ ಸರಣಿಯ ಮೊದಲ ಪಂದ್ಯ ಚೆನ್ನೈ ಮೈದಾನದಲ್ಲಿ ನಡೆದಿದ್ದು, ಟೀಂ ಇಂಡಿಯಾ ಕೇವಲ 4 ದಿನಗಳಲ್ಲಿ ಪಂದ್ಯ ಮುಗಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಅವರ ಕಣ್ಣು ಈ ಟೆಸ್ಟ್ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡುವತ್ತ ನೆಟ್ಟಿದೆ. ನವೆಂಬರ್ 2021ರಲ್ಲಿ ಕಾನ್ಪುರದಲ್ಲಿ ಕೊನೆಯ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡವು ಟೆಸ್ಟ್ ಪಂದ್ಯವನ್ನು ಆಡಿತ್ತು, ನಂತರ ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಈ ಪಂದ್ಯಕ್ಕೆ 7 ಪ್ರಮುಖ ಆಟಗಾರರಿಗೆ ಅವಕಾಶ ದೊರೆಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ಈ 7 ಆಟಗಾರರು ಕಳೆದ ವರ್ಷ ಕಾನ್ಪುರದಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಆಡಿದ್ದರು. ಆದರೆ ಈ ಆಟಗಾರರು ಇದೀಗ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. 

ಅಜಿಂಕ್ಯ ರಹಾನೆಯಿಂದ ಹಿಡಿದು ಶ್ರೇಯಸ್ ಅಯ್ಯರ್‌ವರೆಗೆ ಎಲ್ಲರೂ ನಾಪತ್ತೆ

2021ರಲ್ಲಿ ಕಾನ್ಪುರದಲ್ಲಿ ಕೊನೆಯ ಟೆಸ್ಟ್ ಪಂದ್ಯ ನಡೆದಾಗ, ಆ ಸಮಯದಲ್ಲಿ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯವನ್ನು ಆಡಿರಲಿಲ್ಲ. ಈ ಪರಿಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಆದರೆ ಈಗ ಕಳಪೆ ಫಾರ್ಮ್‌ನಿಂದ ಟೀಂ ಇಂಡಿಯಾದಲ್ಲಿ ಅವರಿಗೆ ಅವಕಾಶ ಸಿಕ್ಕಿಲ್ಲ. ಆ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ಗೆ ಚೊಚ್ಚಲ ಟೆಸ್ಟ್‌ ಪಂದ್ಯವಾಡುವ ಅವಕಾಶ ಸಿಕ್ಕಿತ್ತು. ಅಂದು ಅವರು ಶತಕ ಸಿಡಿಸಿದ್ದಲ್ಲದೆ, ಪಂದ್ಯಶ್ರೇಷ್ಠ ಪ್ರಶಸ್ತಿಗೂ ಪಾತ್ರರಾಗಿದ್ದರು. ಆದರೆ ನಿರಂತರ ಕಳಪೆ ಫಾರ್ಮ್‌ನಿಂದ ಅಯ್ಯರ್ ಟೆಸ್ಟ್ ತಂಡದಿಂದ ಹೊರಗುಳಿದಿದ್ದಾರೆ. ಕಾನ್ಪುರದಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಶರ್ಮಾ ಕೂಡ ಟೀಂ ಇಂಡಿಯಾದ ಭಾಗವಾಗಿದ್ದರು, ಆದರೆ ಹೊಸ ವೇಗದ ಬೌಲಿಂಗ್ ದಾಳಿಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆದಾರರು ನಿರ್ಧಾರಗಳನ್ನು ತೆಗೆದುಕೊಂಡರು. ಇದರಿಂದ ಇಶಾಂತ್ ದೀರ್ಘಕಾಲದವರೆಗೆ ಟೀಂ ಇಂಡಿಯಾದ ಭಾಗವಾಗಿರಲಿಲ್ಲ.

ಇದನ್ನೂ ಓದಿ: IND vs BAN: ಎರಡನೇ ಟೆಸ್ಟ್‌ ಪಂದ್ಯಕ್ಕೆ ಭಾರಿ ಅಡೆ ತಡೆ! ರದ್ದಾಗುತ್ತಾ ಬಾಂಗ್ಲಾ vs ಭಾರತ ಪಂದ್ಯ?

ಕಾನ್ಪುರದಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಜೊತೆಗೆ ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾಕ್ಕೆ ಓಪನಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಆದಾಗ್ಯೂ ಕೆಲವು ಸಮಯದಿಂದ ಅವರು ಟೀಂ ಇಂಡಿಯಾಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಕಾನ್ಪುರದಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ಕೂಡ ಭಾರತ ತಂಡದ ಭಾಗವಾಗಿದ್ದರು, ಆದರೆ ಕಳಪೆ ಫಾರ್ಮ್‌ನಿಂದ ಅವರು ಬೌಲಿಂಗ್ ದಾಳಿಗೆ ಹೊಂದಿಕೊಳ್ಳುತ್ತಿಲ್ಲ. ಇದಲ್ಲದೆ ಈ ಪಟ್ಟಿಯಲ್ಲಿ ಚೇತೇಶ್ವರ ಪೂಜಾರ ಮತ್ತು ವೃದ್ಧಿಮಾನ್ ಸಹಾ ಅವರ ಹೆಸರುಗಳೂ ಸೇರಿವೆ. ಇದರಲ್ಲಿ ಈ ಇಬ್ಬರೂ ಆಟಗಾರರು ಕಳಪೆ ಫಾರ್ಮ್‌ನಿಂದ ಭಾರತ ತಂಡದಿಂದ ಹೊರಗುಳಿದಿದ್ದಾರೆ.

ಕಾನ್ಪುರದಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ?

ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಭಾರತ ತಂಡದ ಟೆಸ್ಟ್ ದಾಖಲೆ ಹೇಳಿಕೊಳ್ಳುವಂತಿಲ್ಲ. ಈ ಮೈದಾನದಲ್ಲಿ ಇದುವರೆಗೆ ಟೀಂ ಇಂಡಿಯಾ 23 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ಪೈಕಿ ಕೇವಲ 7ರಲ್ಲಿ ಗೆಲುವು ಸಾಧಿಸಿದ್ದು, 3ರಲ್ಲಿ ಸೋತಿದ್ದಾರೆ. ಆದರೆ 13 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. 1983ರಲ್ಲಿ ಈ ಮೈದಾನದಲ್ಲಿ ಭಾರತ ತಂಡ ಕೊನೆಯ ಬಾರಿಗೆ ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡಿತ್ತು.

ಇದನ್ನೂ ಓದಿ: "ಈ ಆಟಗಾರ ನಮಗೆ ಬೇಕೇ ಬೇಕು"..! ಟೀಂ ಇಂಡಿಯಾದ ಸ್ಟಾರ್‌ ಆಟಗಾರನಿಗಾಗಿ ಪಟ್ಟು ಹಿಡಿದು ಕೂತ ಅಫ್ಘಾನಿಸ್ತಾನ ತಂಡ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News