ನವದೆಹಲಿ: ಶನಿವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಎದುರು ಪಾಕಿಸ್ತಾನ ಮತ್ತೊಮ್ಮೆ ಮುಗ್ಗರಿಸಿದೆ. 117 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದ ಭಾರತ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಈ ಹೀನಾಯ ಸೋಲಿನ ಬಳಿಕ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ತಮ್ಮ ತಂಡದ ಪ್ರದರ್ಶನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಪಂದ್ಯ ಮುಗಿದ ಬಳಿಕ ಮಾತನಾಡಿದ ಪಾಕ್ ನಾಯಕ, ತಮ್ಮ ತಂಡವು ಉತ್ತಮ ಜೊತೆಯಾಟವಾಡಲು ವಿಫಲವಾಗಿದೆ ಎಂದು ಹೇಳಿದರು. ಒಂದು ಹಂತದಲ್ಲಿ ಪಾಕಿಸ್ತಾನ ತಂಡ 2 ವಿಕೆಟ್ಗೆ 155 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು, ಆದರೆ ನಂತರ ತಂಡವು 36 ರನ್ ಗಳಿಸುವುದರೊಳಗೆ 8 ವಿಕೆಟ್ಗಳನ್ನು ಕಳೆದುಕೊಂಡಿತು. 192 ರನ್ಗಳ ಗೆಲುವಿನ ಗುರಿಯನ್ನು ಭಾರತ 30.3 ಓವರ್ಗಳಲ್ಲಿ ತಲುಪಿತು.
ಇದನ್ನೂ ಓದಿ: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್’ನಲ್ಲಿ 300 ಸಿಕ್ಸರ್ ಬಾರಿಸಿ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ
ಬಾಬರ್ ಆಜಮ್ ಕೋಪ!
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ 8ನೇ ಸೋಲು ಅನುಭವಿಸಿದ ನಂತರ ಪಾಕಿಸ್ತಾನದ ನಾಯಕ ಬಾಬರ್ ಅಜಮ್, ‘ನಾವು ಉತ್ತಮ ಆರಂಭವನ್ನು ಹೊಂದಿದ್ದೇವು. ಆರಂಭದಲ್ಲಿ ತಂಡಕ್ಕೆ ಉತ್ತಮ ಜೊತೆಯಾಟ ಸಿಕ್ಕಿತಾದರೂ ನಂತರ ಹಠಾತ್ ವಿಕೆಟ್ಗಳು ಪತನವಾದವು. ಹೀಗಾಗಿ ನಮಗೆ ಉತ್ತಮ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ಬಾಬರ್ ಅಜಮ್ ಪಾಕಿಸ್ತಾನದ ಪರ ಗರಿಷ್ಠ 50 ರನ್ ಗಳಿಸಿದರು. ಬಾಬರ್ ಅಜಮ್ ಔಟಾದ ಬಳಿಕ ತಂಡದ ಇನಿಂಗ್ಸ್ ದಿಢೀರ್ ಕುಸಿತ ಕಂಡಿತು.
ವೈಫಲ್ಯ ಒಪ್ಪಿಕೊಂಡ ಬಾಬರ್!
‘ನಾವು ಬ್ಯಾಟಿಂಗ್ ಪ್ರಾರಂಭಿಸಿದ ರೀತಿಯಲ್ಲಿ ನಮ್ಮ ಗುರಿ 280-290 ಆಗಿತ್ತು, ಆದರೆ ನಿರಂತರ ವಿಕೆಟ್ಗಳ ಪತನ ನಮಗೆ ಸಂಕಷ್ಟ ತಂದೊಡ್ಡಿತು. ಹೀಗಾಗಿ ನಾವು ದೊಡ್ಡ ಮೊತ್ತ ಗಳಿಸಲು ವಿಫಲರಾದೆವು. ಹೊಸ ಚೆಂಡಿನಲ್ಲೂ ನಮಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ರೋಹಿತ್ ಬ್ಯಾಟಿಂಗ್ ಮಾಡಿದ ರೀತಿ ಅತ್ಯುತ್ತಮ ಇನ್ನಿಂಗ್ಸ್. ನಾವು ವಿಕೆಟ್ ಉರುಳಿಸಲು ಪ್ರಯತ್ನಿಸಿದೆವು, ಆದರೆ ಅದು ಸಾಧ್ಯವಾಗಲಿಲ್ಲ’ವೆಂದು ಬಾಬರ್ ಹೇಳಿದ್ದಾರೆ.
ಇದನ್ನೂ ಓದಿ: ಸೋಲಿಲ್ಲದ ಸರದಾರ ‘ಭಾರತ’ಕ್ಕೆ ಅದ್ಭುತ ಜಯ: ಟೀಂ ಇಂಡಿಯಾ ದಾಳಿಗೆ ಬೆದರಿದ ಪಾಕಿಸ್ತಾನಕ್ಕೆ ಹೀನಾಯ ಸೋಲು
ಭಾರತದ ವಿಶ್ವಕಪ್ ಗೆಲುವಿನ ದಾಖಲೆ!
ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು. ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಗರಿಷ್ಠ 86 ರನ್ ಗಳಿಸಿದರು. ರೋಹಿತ್ ಶರ್ಮಾ ಅವರ ಇನ್ನಿಂಗ್ಸ್ನಲ್ಲಿ 6 ಬೌಂಡರಿ ಮತ್ತು 6 ಸಿಕ್ಸರ್ಗಳು ಸೇರಿದ್ದವು. ರೋಹಿತ್ ಶರ್ಮಾ ಹೊರತುಪಡಿಸಿ, ಶ್ರೇಯಸ್ ಅಯ್ಯರ್ 53 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.'
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.