ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ ಈ ಮೂವರು ಟೀಮ್ ಇಂಡಿಯಾ ಸ್ಟಾರ್ ಆಟಗಾರರು ಕ್ರಿಕೆಟ್ ನಿಂದ ನಿವೃತ್ತಿ...!

ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅವರು ಟೂರ್ನಿಯ ಕುರಿತಾಗಿ ಮಾತನಾಡುತ್ತಾ ಚಾಂಪಿಯನ್ಸ್ ಟ್ರೋಫಿ ಕೊಹ್ಲಿ, ರೋಹಿತ್ ಮತ್ತು ಜಡೇಜಾ ಅವರಿಗೆ ಕೊನೆಯ ಐಸಿಸಿ ಟೂರ್ನಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Written by - Manjunath N | Last Updated : Feb 15, 2025, 04:48 PM IST
  • ಮೂವರು ಹಿರಿಯ ಆಟಗಾರರು 2027 ರಲ್ಲಿ ನಡೆಯುವ ಮುಂದಿನ ಏಕದಿನ ವಿಶ್ವಕಪ್‌ವರೆಗೆ ಕಾಯುವುದಿಲ್ಲ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.
  • ಭಾರತದ 2024 ರ ಟಿ20 ವಿಶ್ವಕಪ್ ನಂತರ ಕೊಹ್ಲಿ, ರೋಹಿತ್ ಮತ್ತು ಜಡೇಜಾ ಟಿ20ಯಿಂದ ನಿವೃತ್ತಿ ಘೋಷಿಸಿದರು.
  • ಈ ನಿರ್ಧಾರವು ಚಾಂಪಿಯನ್ಸ್ ಟ್ರೋಫಿಯ ನಂತರ ಅವರು ತಮ್ಮ ಏಕದಿನ ವೃತ್ತಿಜೀವನವನ್ನು ಕೊನೆಗೊಳಿಸುತ್ತಾರೆಯೇ ಎಂಬ ಬಗ್ಗೆ ಮತ್ತಷ್ಟು ಚರ್ಚೆಗಳನ್ನು ಹುಟ್ಟುಹಾಕಿತು
ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ ಈ ಮೂವರು ಟೀಮ್ ಇಂಡಿಯಾ ಸ್ಟಾರ್ ಆಟಗಾರರು ಕ್ರಿಕೆಟ್ ನಿಂದ ನಿವೃತ್ತಿ...! title=

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಗೆಲುವಿನ ನಂತರ, ಟೀಮ್ ಇಂಡಿಯಾ ಈಗ ಚಾಂಪಿಯನ್ಸ್ ಟ್ರೋಫಿ ಗೆಲ್ಲುವತ್ತ ಕಣ್ಣಿಟ್ಟಿದೆ. ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದ ನಂತರ, ಭಾರತ ತಂಡ ಮತ್ತೊಂದು ಐಸಿಸಿ ಟೂರ್ನಿಯನ್ನು ಗೆಲ್ಲುವ ಗುರಿ ಹೊಂದಿದೆ. ಇದಲ್ಲದೆ, ಭಾರತದ ಅನೇಕ ಶ್ರೇಷ್ಠ ಆಟಗಾರರಿಗೆ ಇದು ಕೊನೆಯ ಚಾಂಪಿಯನ್ಸ್ ಟ್ರೋಫಿಯಾಗಬಹುದು ಎನ್ನಲಾಗಿದೆ.

ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅವರು ಟೂರ್ನಿಯ ಕುರಿತಾಗಿ ಮಾತನಾಡುತ್ತಾ ಚಾಂಪಿಯನ್ಸ್ ಟ್ರೋಫಿ ಕೊಹ್ಲಿ, ರೋಹಿತ್ ಮತ್ತು ಜಡೇಜಾ ಅವರಿಗೆ ಕೊನೆಯ ಐಸಿಸಿ ಟೂರ್ನಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ- Railway New Rules: ರೈಲ್ವೆ ಕೌಂಟರ್ ಟಿಕೆಟ್ ಸಂಬಂಧಿಸಿದಂತೆ ಮಹತ್ವದ ಆದೇಶ, ನಿಮಿಷಗಳಲ್ಲೇ ಹಣ ರಿಟರ್ನ್ 

ಮುಂದಿನ ವಿಶ್ವಕಪ್‌ನಲ್ಲಿ ಆಡುವುದು ಕಷ್ಟ:

ಭಾರತದ 2024 ರ ಟಿ20 ವಿಶ್ವಕಪ್ ನಂತರ ಕೊಹ್ಲಿ, ರೋಹಿತ್ ಮತ್ತು ಜಡೇಜಾ ಟಿ20ಯಿಂದ ನಿವೃತ್ತಿ ಘೋಷಿಸಿದರು.ಈ ನಿರ್ಧಾರವು ಚಾಂಪಿಯನ್ಸ್ ಟ್ರೋಫಿಯ ನಂತರ ಅವರು ತಮ್ಮ ಏಕದಿನ ವೃತ್ತಿಜೀವನವನ್ನು ಕೊನೆಗೊಳಿಸುತ್ತಾರೆಯೇ ಎಂಬ ಬಗ್ಗೆ ಮತ್ತಷ್ಟು ಚರ್ಚೆಗಳನ್ನು ಹುಟ್ಟುಹಾಕಿತು, ಆಕಾಶ್ ಚೋಪ್ರಾ ತಮ್ಮ ಇತ್ತೀಚಿನ ಯೂಟ್ಯೂಬ್ ವಿಡಿಯೋದಲ್ಲಿ, ಈ ಪಂದ್ಯಾವಳಿಯು ಮೂವರೂ ತಮ್ಮ ಐಸಿಸಿ ವೃತ್ತಿಜೀವನವನ್ನು ಕೊನೆಗೊಳಿಸಲು ಇದೊಂದು ಉತ್ತಮ ಅವಕಾಶವಾಗಿದೆ ಎಂದು ವಿವರಿಸಿದ್ದಾರೆ.

ಆಕಾಶ್ ಚೋಪ್ರಾ ಹೇಳಿದ್ದೇನು?

"ನಾನು ಭಾರವಾದ ಹೃದಯದಿಂದ ಹೇಳುತ್ತಿದ್ದೇನೆ...ಚಾಂಪಿಯನ್ಸ್ ಟ್ರೋಫಿ ನಂತರ ಈ ವರ್ಷ ಮತ್ತೊಂದು ಐಸಿಸಿ ಟೂರ್ನಿ ಇದೆ, ಅದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ನಾವು ಈ ಫೈನಲ್ ಗೆ ತಲುಪಿಲ್ಲ, ಆದ್ದರಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಯಾರೂ ಆಡುವುದಿಲ್ಲ.ನಂತರ ಮುಂದಿನ ವರ್ಷ ಐಸಿಸಿ ಟಿ 20 ವಿಶ್ವಕಪ್ ಟೂರ್ನಿ ಇದೆ, ಆದರೆ ಮೂವರೂ ಆಟಗಾರರು ಈಗಾಗಲೇ ಟಿ 20  ಕ್ರಿಕೆಟ್ ನಿಂದ ನಿವೃತ್ತರಾಗಿದ್ದಾರೆ.ಇನ್ನು ಏಕದಿನ ವಿಶ್ವಕಪ್ 2027 ರಲ್ಲಿ ನಡೆಯಲಿದೆ, ಅದು ಇನ್ನೂ ಬಹಳ ದೂರದಲ್ಲಿರುವುದರಿಂದ 2027 ರ ವೇಳೆಗೆ ಜಗತ್ತು ತುಂಬಾ ವಿಭಿನ್ನವಾಗಿ ಕಾಣುತ್ತದೆ ಎಂದು ಚೋಪ್ರಾ ಹೇಳಿದ್ದಾರೆ.

36 ವರ್ಷದ ಕೊಹ್ಲಿ ಮತ್ತು ಜಡೇಜಾ, 37 ವರ್ಷದ ರೋಹಿತ್ ಜೊತೆಗೆ, ಈ ಮೂವರು ಆಟಗಾರರು ಒಂದು ದಶಕಕ್ಕೂ ಹೆಚ್ಚು ಕಾಲ ಭಾರತೀಯ ಕ್ರಿಕೆಟ್‌ನ ಆಧಾರಸ್ತಂಭಗಳಾಗಿದ್ದಾರೆ.ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಇತ್ತೀಚಿನ ಪ್ರದರ್ಶನ ಕಳವಳಗಳನ್ನು ಹುಟ್ಟುಹಾಕಿದ್ದರೂ ಸಹ, ಐಸಿಸಿ ಪಂದ್ಯಾವಳಿಗಳಲ್ಲಿ ಅವರು ನೀಡಿದ ಅವರ ಕೊಡುಗೆ ಗಮನಾರ್ಹವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News