ಪಾಕಿಸ್ತಾನದ ಬಾಲಕೋಟ್ ನ ಉಗ್ರರ ನೆಲೆಯ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದ್ದಕ್ಕೆ 250 ಕ್ಕೂ ಅಧಿಕ ಉಗ್ರರು ಹತ್ಯೆಯಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಅವರ ಹೇಳಿಕೆಯೂ ಕೇಂದ್ರ ಸಚಿವ ಎಸ್.ಎಸ್. ಅಹ್ಲುವಾಲಿಯಾ ಅವರ ಹೇಳಿಕೆಯ ನಂತರ ಬಂದಿದೆ.
ಫೆ.14 ರಂದು ಸಿಂಧನೂರಿನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ವಿಧಾನಸಭಾ ಚುನಾವಣೆಯಲ್ಲಿ ಕೆಲವೇ ಕೆಲವು ಸೀಟುಗಳ ಅಂತರದಲ್ಲಿ ಸೋತೆವು. ಆದರೆ ಆ ಸೋಲು ಮುಂಬರುವ ಲೋಕಸಭಾ ಚುನಾವಣೆಗೆ ಗೆಲುವಿನ ಮುನ್ನುಡಿ ಬರೆಯುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದರು.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಅಯೋಧೆಯಲ್ಲಿ ಅದೇ ಸ್ಥಳದಲ್ಲಿ ಆದಷ್ಟು ಬೇಗ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಕರ್ನಾಟಕದ ಜನತೆಗೆ ಹೇಳಬಯಸುವೆ ಎಂದರು.
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ವ್ಯಂಗ್ಯವಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ "ಒಡಿಶಾದ ಮುಖ್ಯಮಂತ್ರಿಗೆ ಒಡಿಯಾ ಭಾಷೆ ಗೊತ್ತಿಲ್ಲವೆಂದರೆ ಅವರಿಗೆ ಆಡಳಿತ ನಡೆಸುವ ಯಾವುದೇ ಹಕ್ಕು ಕೂಡ ಇಲ್ಲ " ಎಂದು ಅಮಿತ್ ಶಾ ಒಡಿಶಾದ ಪುರಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದರು.
ಫೆಬ್ರವರಿ 2 ರಂದು ಅಮ್ರಾಹಾದಲ್ಲಿ ಪಶ್ಚಿಮ ವಲಯದ ಬೂತ್ ಅಧ್ಯಕ್ಷರ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತನಾಡಲಿದ್ದಾರೆ. ಫೆಬ್ರವರಿ 6 ರಂದು ಇಟಾದಲ್ಲಿ ಬ್ರಾಜ್ ಪ್ರದೇಶದ ಬೂತ್ ಅಧ್ಯಕ್ಷರ ಸಮಾವೇಶದಲ್ಲಿ ಭಾಗಿಯಾಗಲಿರುವ ಅವರು ಪಕ್ಷದ ಕಾರ್ಯಕರ್ತರೊಂದಿಗೆ ನೇರ ಮಾತುಕತೆ ನಡೆಸುತ್ತಾರೆ.
ಅಮಿತ್ ಷಾ ಅವರ ಹೆಲಿಕಾಪ್ಟರ್ ಸ್ಥಳಾಂತರದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬಿಜೆಪಿ ಮಾಹಿತಿಯನ್ನು ತಿರುಚಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಕೀಡಿ ಕಾರಿದರು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಗ್ಯ ಸುಧಾರಿಸುತ್ತಿದೆ, ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿಜೆಪಿ ವಕ್ತಾರ ಅನಿಲ್ ಬಲೂನಿ ಗುರುವಾರ ತಿಳಿಸಿದರು.
ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಜೆಡಿ (ಯು) ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಎಲ್ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.