ಬೆಳಗಾವಿ ಕನ್ನಡಪರ ಹೋರಾಟಗಾರರ ಮೇಲೆ ರೌಡಿಶೀಟ್ ವಿಚಾರ. ಸರ್ಕಾರ ಮತ್ತು ಪೊಲೀಸರ ವಿರುದ್ಧ ಭುಗಿಲೆದ್ದ ಕನ್ನಡಿಗರ ಕಿಚ್ಚು. ಕನ್ನಡಪರ ಹೋರಾಟಗಾರ ಸಂಪತ್ಕುಮಾರ್ ದೇಸಾಯಿ ಮತ್ತು ಅನಿಲ್ ದಡ್ಡಿ ಮೇಲಿನ ರೌಡಿಶೀಟ್ ಕೇಸ್ ಕೈಬಿಡುವಂತೆ ಆಗ್ರಹ. ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಕನ್ನಡಿಗರ ಅಭಿಯಾನ.
ಬೆಳಗಾವಿ ಜಿಲ್ಲೆಯಲ್ಲಿ ಪಂಚರತ್ನ ಕಹಳೆ ಮೊಳಗುತ್ತಿದೆ.. ಖಾನಾಪುರ, ಕುಡಚಿ, ರಾಯಭಾಗ, ಬೈಲಹೊಂಗಲ ತಾಲೂಕಿನ 30-40 ಗ್ರಾಮಗಳಿಗೆ ಭೇಟಿ ನೀಡ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಚುನಾವಣೆ ಸಮಿಪಿಸುತ್ತಿದಂತೆ ರಾಜಕೀಯ ಅಖಾಡ ರಂಗೇರುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಷ್ಟು ದಿನ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಚುನಾವಣೆ ಪ್ರಚಾರ ಪ್ರಾರಂಭಿಸಿದ್ದು, 2023ರ ಚುನಾವಣೆಗೆ ಇದೆ ಮೊದಲ ಬಾರಿ ದಳಪತಿಗಳು ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಈ ಬಾರಿ ಪಂಚರತ್ನ ಯಾತ್ರೆ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿರೋ HDK ಬೆಳಗಾವಿ ಜಿಲ್ಲೆಯಲ್ಲಿ ಖಾತೆ ತೆರೆಯಲು ಕಸರತ್ತು ನಡೆಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ...
ಹಿಂದೂ ಪದವನ್ನು ಅಶ್ಲೀಲ ಎನ್ನುವವರು ತಾಕತ್ತಿದ್ದರೆ ಹಿಂದೂಗಳ ಮತ ಬೇಡ ಎನ್ನಲಿ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಆಕ್ರೋಶ ಹೊರ ಹಾಕಿದ್ದಾರೆ.. ಬೆಳಗಾವಿಯಲ್ಲಿ ಸತೀಶ್ ಸ್ಪರ್ಧಿಸಲು ಕ್ಷೇತ್ರ ಇಲ್ಲ ಎಂದಿದ್ದಾರೆ..
ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.27, 28ರಂದು ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದಾರೆ.. ಧಾರವಾಡ ಜಿಲ್ಲೆ ಕುಂದಗೋಳ ಪಟ್ಟಣದಲ್ಲಿ ಕಾರ್ಯಕ್ರಮದಲ್ಲೂ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಆಸ್ಪತ್ರೆಯ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇನ್ನು ಬೆಳಗಾವಿಯ ಆಸ್ಪತ್ರೆಗೆ ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಸಚಿವ ಸ್ಥಾನ ಸಿಗಲಿ ಬಿಡಲಿ, ನನಗೆ ಪಕ್ಷ ಸಂಘಟನೆ ಮುಖ್ಯ. ಇದರಿಂದ ಬೆಳಗಾವಿ ಗ್ರಾಮೀಣದಿಂದ ಪ್ರಾರಂಭ ಮಾಡಲಾಗಿದೆ. ಜನಸಾಮಾನ್ಯರ ಪ್ರಾಮಾಣಿಕ ಕೆಲವನ್ನು ಮಾಡಬೇಕು. ಹಣದಿಂದ ಚುನಾವಣೆಯಲ್ಲಿ ಆಯ್ಕೆ ಆಗುತ್ತೇನೆ ಎಂದರೆ ಆಗುವುದಿಲ್ಲ.
2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧಾರ ಮಾಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಇಂದುವಿಧೇಯಕ ಮಂಡನೆ ಮಾಡಲಿದ್ದಾರೆ.
ಎಂಇಎಸ್ ಮಹಾಮೇಳಾವ್ಗೆ ಬಿತ್ತು ಬ್ರೇಕ್. ಮಹಾಮೇಳಾವ್ಗೆ ಅನುಮತಿ ನೀಡದ ಬೆಳಗಾವಿ ಜಿಲ್ಲಾಡಳಿತ. ನಾಡದ್ರೋಹಿ ಎಂಇಎಸ್ಗೆ ತೀವ್ರ ಮುಖಭಂಗ. ವೇದಿಕೆ ಹಾಕಲು ಬಂದವರಿಗೆ ಪೊಲೀಸರ ವಾರ್ನಿಂಗ್. ಎಂಇಎಸ್ ಪುಂಡರಿಂದಲೇ ವೇದಿಕೆ ತೆರವು.
ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯವನ್ನು ಮುನ್ನಡೆಸುವ ದಿಸೆಯಲ್ಲಿ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಬೇಕಿದೆ. ಹಲವಾರು ಕಾನೂನುಗಳ ರಚನೆಗಳ ಉದ್ದೇಶದಿಂದ ಕಲಾಪ ನಡೆಸಲಾಗುತ್ತಿದೆ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳಿನ ರಾಜ, ಸುವರ್ಣ ಸೌಧದ ಅಸೆಂಬ್ಲಿ ಹಾಲ್ ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ನನಗೆ ಗೊತ್ತೇ ಇಲ್ಲ ಎನ್ನುತ್ತಾರೆ ಎಂದು ಮುಖ್ಯಮಂತ್ರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸ್ವಾತಂತ್ರ ಹೋರಾಟಕ್ಕೆ ಸಾವರ್ಕರ್ ಕೊಡುಗೆ ಇಲ್ಲ ಎಂದರು.
2019 ರಲ್ಲಿ ವಿರೋಧ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಭಾರಿ ವಿರೋಧ ಮಾಡಿದ್ದ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆಯನ್ನು ಈ ಬಾರಿಯ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ.
ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸದನದ ಪ್ರಾರಂಭದಲ್ಲೇ ಕೇಸರಿ ಕಲಿಗಳ ಮೇಗಾ ಪ್ಲಾನ್ ಗೆ ಕದನ ಶುರುವಾಗುವ ಎಲ್ಲಾ ಸಾಧ್ಯತೆಗಳಿವೆ. ಸರ್ಕಾರದ ವಿರುದ್ಧ ಭಾರಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದ ಕೈ ಪಡೆಗೆ, ಬಿಜೆಪಿ ಕೇಸರಿ ಕದನಕ್ಕೆ ವೇದಿಕೆ ಸಿದ್ದ ಮಾಡಿದೆ. ಆ ಮೂಲಕ ಚುನಾವಣಾ ಹೊತ್ತಿನಲ್ಲಿ ಕೇಸರಿ ಕಹಳೆ ಮೊಳಗಿಸಲು ಸರ್ಕಾರ ಅಧಿಕೃತವಾಗಿ ಸಜ್ಜಾಗಿದೆ.
ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದ್ದು, ಎಸ್ಸಿ, ಎಸ್ಟಿ ಮೀಸಲಾತಿ ಮಸೂದೆ (Ordinance Replacement bill) ಸೇರಿದಂತೆ ಇತರ ಇಲಾಖೆಗಳ ಹಲವಾರು ಮಸೂದೆಗಳನ್ನು ಮಂಡಿಸಲಾಗುವುದು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಹಾ ಪುಂಡರು ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಕನ್ನಡ ನೆಲದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸಿ ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ನಿರ್ಣಯ ಮಂಡನೆ ಮಾಡಿದ್ದಾರೆ.
ನೆಲೆ, ಜಲ, ಭಾಷಾ ವಿಷಯದಲ್ಲಿ ರಾಜಕಾರಣಿಗಳೆಲ್ಲ ಒಂದೇ. ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಬಿಡಬೇಕು. ನಾವು ಯಾರು ಇಲ್ಲಿ ಬಳೆ ಹಾಕಿಲ್ಲ.. ಎಲ್ಲರೂ ಗಂಡಸರಿದ್ದೀವಿ ಎಂದು MES ಕಾರ್ಯಕರ್ತರಿಗೆ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ.
ಶೀವಸೇನೆ ಉದ್ಧಟತನದ ವಿರುದ್ಧ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.. ಬೆಳಗಾವಿಯ ಹಿರೇಬಾಗೇವಾಡಿ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರ ನೋಂದಣಿ ಲಾರಿಗಳ ಗಾಜು ಒಡೆದು ಆಕ್ರೋಶ ಹೊರ ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.