ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ನಿರಂತರ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಜಲಪ್ರಳಯವೇ ಸೃಷ್ಟಿ ಆಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿನ ಮನೆಗಳು ಸಂಪೂರ್ಣ ಜಲಾವೃತವಾಗಿವೆ.
ನಿರಂತರ ಮಳೆಗೆ ಅನ್ನದಾತರು ಅಕ್ಷರಶಃ ಕಂಗಾಲಾಗಿ ಮೊಳಕೆ ಒಡೆಯುತ್ತಿದ್ದ ಸಸಿಗಳೆಲ್ಲವೂ ಜಲಾವೃತ ಸಸಿಗಳೆಲ್ಲವೂ ಜಲಾವೃತವಾಗಿದ್ದರಿಂದ ರೈತರಿಗೆ ಭಾರಿ ನಷ್ಟ ಔರಾದ್ ತಾಲೂಕಿನ ಜಂಬಗಿ ಗ್ರಾಮದ ರೈತ ಕಂಗಾಲು
ದಕ್ಷಿಣ ಕನ್ನಡದ ಮುಲ್ಕಿ, ಮೂಡಬಿದಿರೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ಉಡುಪಿ, ಕಾರ್ಕಳ, ಕೋಟಾ, ಸಿದ್ದಾಪುರದಲ್ಲೂ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಇನ್ನೂ 2 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ ಜಿಲ್ಲೆ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಇಲ್ಲಿನ ಗೋಕಾಕ್ ಫಾಲ್ಸ್ ತುಂಬಿ ಹರಿಯುತ್ತಿದೆ. ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದ ಗೋಕಾಕ ಫಾಲ್ಸ್ ನೋಡಲು ಜನಸಾಗರವೇ ಹರಿದುಬರುತ್ತಿದೆ. ಈ ನಯನ ಮನೋಹರ ದೃಶ್ಯದ ಕೆಲವೊಂದು ಫೋಟೋಗಳನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಹಲವು ಕಡೆ ಧಾರಾಕಾರ ಮಳೆ ಮುಂದುವರಿದಿದೆ.. ಕಳೆದ 1 ವಾರದಿಂದ ಸರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.. ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯ ಎಡೆಬಿಡದೇ ಅಬ್ಬರಿಸುತ್ತಿದ್ದಾನೆ.. ಇತ್ತ ಮಹಾರಾಷ್ಟ್ರದಲ್ಲೂ ವರುಣನ ಅಬ್ಬರ ಜೋರಾಗಿತ್ತು ಮತ್ತೆ ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರವಾಹದ ಭೀತಿ ಉಂಟಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ KRS ಡ್ಯಾಂ ಭರ್ತಿಗೆ ಕೇವಲ ಇನ್ನು 3 ಅಡಿ ಬಾಕಿ ಉಳಿದಿದೆ. KRSಗೆ ಒಳಹರಿವಿನ ಪ್ರಮಾಣ 34304 ಕ್ಯೂಸೆಕ್ ಇದ್ದು, ಡ್ಯಾಂನ ನೀರಿನ ಮಟ್ಟ 121.42 ಅಡಿ ದಾಟಿದೆ. KRS ಹೊರಹರಿವಿನ ಪ್ರಮಾಣ 3207 ಕ್ಯೂಸೆಕ್ ಇದೆ.
IMD ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯ ಬಡಾಕೆರೆ ಗ್ರಾಮದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಅಪಾರ ಪ್ರಮಾಣದ ಜಮೀನು ಮಳೆ ನೀರಿನಿಂದ ಜಲಾವೃತಗೊಂಡಿದೆ.
ರಾಜ್ಯದಲ್ಲಿ ಹೆಚ್ಚಾದ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ..ರಾಜ್ಯದಲ್ಲಿ ಭೀಕರ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ 13 ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆ ಸಚಿವರು, ಡಿಸಿ ಹಾಗೂ ಜಿಪಂ ಸಿಇಒ ಸೇರಿದಂತೆ ಅಧಿಕಾರಿಗಳ ಜೊತೆ ಸಿಎಂ ಸಭೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕೂಡ ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಇನ್ನೆರಡು ದಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ.. ಮೂರು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ .. ರೆಡ್ ಅಲರ್ಟ್ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ .. ಮುಂದಿನ 5 ದಿನವೂ ಭಾರೀ ಮಳೆ . ನಾಳೆ ಆರೆಂಜ್ ಅಲರ್ಟ್, ಮುಂದಿನ ಮೂರು ದಿನ ಎಲ್ಲೋ ಅಲರ್ಟ್
Himachal Pradesh Cloud Burst: ಹಿಮಾಚಲ ಪ್ರದೇಶದ ಕುಲು ಪ್ರದೇಶದ ಚೋಜ್ ಗ್ರಾಮದಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹದಲ್ಲಿ ಹಲವಾರು ಜನರು ನಾಪತ್ತೆಯಾಗಿದ್ದಾರೆ. ಪ್ರವಾಹದಿಂದಾಗಿ ಅನೇಕ ಮನೆಗಳು ಮತ್ತು ಕ್ಯಾಂಪಿಂಗ್ ಸೈಟ್ಗಳು ಸಹ ಕೊಚ್ಚಿಹೋಗಿವೆ ಎಂದು ವರದಿ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.