ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್ಡಿಆರ್ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.
ಆಗಸ್ಟ್ 1 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇಲ್ಲಿ ಭೂ ಕುಸಿತವು ಪ್ರಕೃತಿ ವಿಕೋಪವಲ್ಲ, ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಆಗಿದೆ. ಯಾರೇ ತಪ್ಪು ಮಾಡಿದರೂ ಕೂಡ ಅವರ ಮೇಲೆ ಕ್ರಮ ವಹಿಸಲಾಗುವುದು, ರಸ್ತೆ ನಿರ್ಮಾಣ ಮಾಡಿರುವವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು. ಪರಿಹಾರ ಕಾಮಗಾರಿ ಮುಗಿದ ಮೇಲೆ ಪ್ರಕರಣದ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು.
ರಾಜ್ಯದ ಕರಾವಳಿ ಇಂದು ಜೋರಾದ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.