ಶಾಸಕಾಂಗ ವ್ಯವಹಾರಗಳ ಸಚಿವ ಬಿ.ರಾಜೇಂದ್ರನಾಥ್ ಅವರು ಸದನದ ವ್ಯವಹಾರದಲ್ಲಿ ಅಡೆತಡೆಗಳನ್ನು ಸೃಷ್ಟಿಸಿದ್ದಕ್ಕಾಗಿ ಶಾಸಕರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದ ಬಳಿಕ ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.
ರಾಜ್ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ, ಅವರ ಕ್ಯಾಬಿನೆಟ್ ಸದಸ್ಯರು, ರಾಜ್ಯ ವಿಧಾನಸಭಾ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಇತರ ಗಣ್ಯರು ಹಾಜರಿದ್ದರು.
ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನೇತೃತ್ವದ ಹಿಂದಿನ ಟಿಡಿಪಿ ಸರ್ಕಾರವು ಪ್ರಜಾ ವೇದಿಕೆ ಕಟ್ಟಡವನ್ನು ನಿರ್ಮಿಸಿತ್ತು. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಆರೋಪಿಸಿ ಅದನ್ನು ನೆಲಸಮ ಮಾಡಲು ಆದೇಶಿಸಿದ್ದರು.
ನಾಲ್ಕು ತೆಲುಗು ದೇಶಂ ಪಕ್ಷದ ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರಿರುವ ಕ್ರಮವನ್ನು ವ್ಯಂಗ್ಯವಾಡಿರುವ ಬಿಎಸ್ಪಿ ನಾಯಕಿ ಮಾಯಾವತಿ ಭ್ರಷ್ಟರಾಗಿದ್ದ ಸಂಸದರು ಈಗ ಹಾಲಿನಷ್ಟೇ ಶುದ್ಧರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ
2014 ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ 620 ಕೋಟಿ ರೂ. ಆಸ್ತಿ ಘೋಷಿಸುವ ಮೂಲಕ ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದ ಗಲ್ಲಾ ಜಯದೇವ್ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗುಂಟೂರಿನಿಂದ ಸ್ಪರ್ಧಿಸಲಿದ್ದಾರೆ.
ಜಗನ್ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ. ಟಿಡಿಪಿ ನೇತೃತ್ವದ ಸರ್ಕಾರದ ಪ್ರಭಾವ ರಾಜ್ಯ ಪೋಲೀಸರ ಮೇಲೆ ಬೀರುವ ಸಾಧ್ಯತೆ ಇರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸಿ ದೆಹಲಿಯಲ್ಲಿರುವ ಆಂಧ್ರ ಭವನದ ಮುಂಭಾಗ ಸೋಮವಾರ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.