ಕೇಂದ್ರ ಸರ್ಕಾರದ 2019 ರ ಮಧ್ಯಂತರ ಬಜೆಟ್ ಈಗ ಭಾರಿ ನಿರೀಕ್ಷೆ ಹುಟ್ಟಿಸಿದೆ.ಮುಂಬರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಮಂಡನೆಯಾಗುತ್ತಿರುವ ಬಜೆಟ್ ನ್ನು ಚುನಾವಣಾ ಬಜೆಟ್ ಎಂದು ಸಹ ಕರೆಯಲಾಗುತ್ತಿದೆ.ಮತದಾರರನ್ನು ಓಲೈಸುವ ನಿಟ್ಟಿನಲ್ಲಿ ಸರ್ಕಾರವು ಕೂಡ ಹಲವು ವಲಯಗಳನ್ನು ಹೆಚ್ಚಿಗೆ ಆಕರ್ಷಿಸುವ ಕೆಲಸವನ್ನು ಮಾಡಲಿದೆ ಎನ್ನಲಾಗಿದೆ.
ವಿತ್ತ ಸಚಿವ ಅರುಣ್ ಜೇಟ್ಲಿ ನ್ಯೂಯಾರ್ಕ್ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ಮಧ್ಯಂತರ ಬಜೆಟ್ಗೆ ಒಂಬತ್ತು ದಿನಗಳ ಮೊದಲು ರೈಲ್ವೇ ಸಚಿವ ಪಿಯೂಷ್ ಗೋಯೆಲ್ ಅವರಿಗೆ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರವು ಫೆಬ್ರವರಿ 1 ರಂದು 4 ತಿಂಗಳ ಮಧ್ಯಂತರ ಬಜೆಟ್ ಮಂಡಿಸಲಿದೆ.
ಪ್ರಧಾನಿ ನರೇಂದ್ರ ಮೋದಿಯ ಸಲಹೆಯ ಮೇರೆಗೆ, ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ರೈಲ್ವೇ ಸಚಿವ ಪಿಯೂಷ್ ಗೋಯೆಲ್ ಅವರಿಗೆ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನ ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ.
ಪ್ರತಿ ಬಾರಿಯಂತೆ ಈ ಬಾರಿ ಕೂಡ ಸರ್ಕಾರ ಮಧ್ಯಮ ವರ್ಗದವರಿಗೆ ಹೆಚ್ಚಿನ ಪರಿಹಾರ ನೀಡುವ ನಿರೀಕ್ಷೆಯಿದೆ. ವಿತ್ತ ಸಚಿವ ಅರುಣ್ ಜೇಟ್ಲಿ ಆದಾಯ ತೆರ್ರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದೆಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.