'ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ಪಕ್ಷಾತೀತವಾಗಿ ನಾಮನಿರ್ದೇಶನ ಮಾಡಿರುವುದು ನನಗೆ ಹೃದಯ ತುಂಬಿದ ಸಂತೋಷ ತಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶಿತರಾಗಿದ್ದಾರೆ.. ಈ ಹಿನ್ನೆಲೆಯಲ್ಲಿ ವೀರೇಂದ್ರ ಹೆಗ್ಗಡೆ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ. ರಾಜ್ಯಸಭೆ ಎಂದರೆ ಹಿರಿಯ ವೇದಿಕೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಾವು ಸೀಮಿತ ಪ್ರದೇಶಗಳಲ್ಲಿ ಮಾಡುತ್ತಿದ್ದ ಸೇವೆಗಳನ್ನು ಈ ಮೂಲಕ ದೇಶವ್ಯಾಪಿ ಮಾಡಲು ಅವಕಾಶ ಸಿಕ್ಕಿದೆ. ಈ ಸ್ಥಾನಕ್ಕೆ ನನ್ನನ್ನು ಆಯ್ದುಕೊಂಡಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.