ರಾಜ್ಯ ಬಿಜೆಪಿ ಭಿನ್ನಮತಕ್ಕೆ ಜಿಲ್ಲಾಧ್ಯಕ್ಷರ ಆಯ್ಕೆ ಮತ್ತಷ್ಟು ಬೆಂಕಿ ಹಚ್ಚಿದೆ. ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ ಸೇರಿ ಕೆಲವು ಜಿಲ್ಲೆಗಳ ಅಧ್ಯಕ್ಷರ ಆಯ್ಕೆಗೆ ತೀವ್ರ ವಿರೋಧ ಬಂದಿದ್ದು, ವಿಜಯೇಂದ್ರ ಬದಲಾವಣೆಗೆ ಮತ್ತಷ್ಟು ಅಸಮಾಧಾನಿತರು ಆಗ್ರಹಿಸಿದ್ದಾರೆ. ಕೇಸರಿ ನಾಯಕರು ಈಗ ಪರಸ್ಪರ ವಾಕ್ಸಮರದಲ್ಲಿ ತೊಡಗಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದನ್ನ ಮತ್ತೆ ಮತ್ತೆ ತೋರಿಸ್ತಿದೆ.
ಜಿಲ್ಲಾಧ್ಯಕ್ಷರ ಆಯ್ಕೆ ಬಳಿಕ ಬಿಜೆಪಿ ಕಾದ ಕುಲುಮೆ..!